ಹೊಸಪೇಟೆ (ವಿಜಯನಗರ): ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ 19.20 ಕ್ವಿಂಟಲ್ ಅಕ್ಕಿಯನ್ನು ಗ್ರಾಮೀಣ ಠಾಣೆ ಪೊಲೀಸರು ಶುಕ್ರವಾರ ಇಲ್ಲಿನ ಅರವಿಂದ ನಗರದ ಮಳಿಗೆಯಿಂದ ವಶಪಡಿಸಿಕೊಂಡಿದ್ದಾರೆ.
ಕಡಿಮೆ ಬೆಲೆಗೆ ಖರೀದಿಸಿದ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ ಮಾಡಿ ಹೆಚ್ಚಿನ ಲಾಭ ಗಳಿಸಲು ದಾಸ್ತಾನು ಮಾಡಿದ್ದ ಅಫ್ರೊಜ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಅಗತ್ಯ ವಸ್ತುಗಳ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಆಹಾರ ಇಲಾಖೆಯ ಇನ್ಸ್ಪೆಕ್ಟರ್ ಆರ್. ಅಜಿತ್ ಕುಮಾರ್, ಶಿರಸ್ತೇದಾರ ಎಚ್. ನಾಗರಾಜ್, ಎಎಸ್ಐ ಸುರೇಶ್, ಹೆಡ್ ಕಾನ್ಸ್ಟೆಬಲ್ಗಳಾದ ಸುಭಾಷ್, ಎಚ್.ವಿ. ಗಾಣದಾಳ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.