ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನಾದ್ಯಂತ ಮಂಗಳವಾರ ಬೆಳಿಗ್ಗೆ ಸುರಿದ ಭಾರಿ ಮಳೆಗೆ ಮೂರು ಮನೆಗಳಿಗೆ ಹಾನಿಯಾಗಿದೆ.
ಬೆಳಿಗ್ಗೆ 5 ಗಂಟೆಗೆ ಆರಂಭವಾದ ಮಳೆ 6.30ರವರೆಗೆ ಬಿದ್ದಿದೆ. ಹೊಲಗಳಲ್ಲಿ ನೀರು ನಿಂತಿದೆ. ಹಳ್ಳಗಳು ತುಂಬಿ ಹರಿದಿವೆ.
ಗುಡೇಕೋಟೆಯಲ್ಲಿ ಅತಿ ಹೆಚ್ಚು 22.3 ಮಿ.ಮೀ ಮಳೆಯಾಗಿದ್ದು, ಕೂಡ್ಲಿಗಿ 14.5, ಬಣವಿಕಲ್ಲು 3.1, ಹೊಸಹಳ್ಳಿ 16.4, ಚಿಕ್ಕಜೋಗಿಹಳ್ಳಿ 17.4 ಮಿ.ಮೀ ಮಳೆಯಾಗಿದೆ. ಮಳೆಯಿಂದ ಕೂಡ್ಲಿಗಿ, ಶಿವಪುರ ಹಾಗೂ ಮರಬನಹಳ್ಳಿ ಗ್ರಾಮದಲ್ಲಿ ತಲಾ ಒಂದು ಮನೆಗೆ ಹಾನಿಯಾಗಿದೆ ಎಂದು ತಹಶೀಲ್ದಾರ್ ಟಿ. ಜಗದೀಶ್ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.