ADVERTISEMENT

ಕೂಡ್ಲಿಗಿ ಕುಕ್ಕುಪ್ಪಿ ಬಳಿ ಬೈಕಿಗೆ ಲಾರಿ ಡಿಕ್ಕಿ; ಅಜ್ಜ, ಮೊಮ್ಮಗ ಸಾವು

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 17:13 IST
Last Updated 7 ಜುಲೈ 2022, 17:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೂಡ್ಲಿಗಿ (ವಿಜಯನಗರ ಜಿಲ್ಲೆ): ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಅಜ್ಜ, ಮೊಮ್ಮಗ ಮೃತಪಟ್ಟ ಘಟನೆ ತಾಲ್ಲೂಕಿನ ಕಕ್ಕುಪ್ಪಿ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ನಾಗರಹುಣೆಸೆ ಗ್ರಾಮದ ಭೀಮಪ್ಪ (55), ಅವರ ಮೊಮ್ಮಗ ಆದಿ (5) ಮೃತರು. ಪಿ.ಆರ್. ವಿನಯ್ ಕುಮಾರ್ ಗಾಯಗೊಂಡಿದ್ದಾರೆ.

‘ಪಟ್ಟಣದ ವಿನಾಯಕ ಶಾಲೆಯಲ್ಲಿ ಎಲ್‌.ಕೆ.ಜಿ.ಯಲ್ಲಿ ಓದುತ್ತಿದ್ದ ಮೊಮ್ಮಗನನ್ನು ಕೆರೆದುಕೊಂಡು ಭೀಮಪ್ಪ ಸ್ವಗ್ರಾಮ ನಾಗರಹುಣೆಸೆಗೆ ಬೈಕಿನಲ್ಲಿ ಹೊರಟಿದ್ದರು. ದಾರಿಯಲ್ಲಿ ಜೊತೆಯಾದ ಅದೇ ಗ್ರಾಮದ ಪಿ.ಆರ್. ವಿನಯ್ ಕುಮಾರ್ ಅವರನ್ನು ಹತ್ತಿಸಿಕೊಂಡು ಹೋಗುತ್ತಿದ್ದಾಗ ಕಕ್ಕುಪ್ಪಿ ಗ್ರಾಮದ ಬಳಿ ಗುಡೇಕೋಟೆ ಕಡೆಯಿಂದ ಅತಿ ವೇಗದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಆದಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಭೀಮಪ್ಪ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತರಾಗಿದ್ದಾರೆ. ವಿನಯ್ ಕುಮಾರ್, ಬಳ್ಳಾರಿ ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.