ADVERTISEMENT

ಬಳ್ಳಾರಿ | ಬಿಜೆಪಿ ಬಲವರ್ಧನೆಗೆ ಶ್ರಮಿಸಿ: ಸಚಿವ ಸಿಂಗ್‌

​ಪ್ರಜಾವಾಣಿ ವಾರ್ತೆ
Published 10 ಮೇ 2022, 8:50 IST
Last Updated 10 ಮೇ 2022, 8:50 IST
ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ವಿಜಯನಗರ ಜಿಲ್ಲೆ ಬಿಜೆಪಿ ಕಾರ್ಯಕಾರಿಣಿಯನ್ನು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಿದರು
ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ವಿಜಯನಗರ ಜಿಲ್ಲೆ ಬಿಜೆಪಿ ಕಾರ್ಯಕಾರಿಣಿಯನ್ನು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸಿದರು   

ಹೊಸಪೇಟೆ (ವಿಜಯನಗರ): ‘ಕಾರ್ಯಕರ್ತರು ಬಿಜೆಪಿ ಬಲವರ್ಧನೆಗೆ ಒಗ್ಗಟ್ಟಿನಿಂದ ಶ್ರಮಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಬೇಕು’ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತಿಳಿಸಿದರು.

ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ‘ನೂತನ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಯಶಸ್ವಿಯಾಗಿ ನಡೆದಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾರ್ಯಕಾರಿಣಿಯ ಸಂದರ್ಭದಲ್ಲಿ ತೋರಿದ ಉತ್ಸಾಹವನ್ನೆ ಮುಂದುವರೆಸಿಕೊಂಡು ಹೋಗಬೇಕು’ ಎಂದು ಹೇಳಿದರು.

ಪಕ್ಷದ ಜಿಲ್ಲಾ ಮಟ್ಟದ ಸಭೆಗಳಲ್ಲಿ ಭಾಗವಹಿಸಿ, ಪಕ್ಷ ಸಂಘಟನೆಯ ಬಗ್ಗೆ ನೀಡುವ ವಿಷಯಗಳನ್ನು ಅರಿತುಕೊಂಡು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬರುವ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು ಎಂದರು.

ADVERTISEMENT

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ವಿಭಾಗದ ಸಂಘಟನಾ ಕಾರ್ಯದರ್ಶಿ ಪೂಜಪ್ಪ, ಜಿಲ್ಲಾ ಪ್ರಭಾರಿ ವಿರೂಪಾಕ್ಷಪ್ಪ ಸಿಂಗನಾಳ್, ಪ್ರಧಾನ ಕಾರ್ಯದರ್ಶಿ ರಘು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.