ADVERTISEMENT

ನಟ ದರ್ಶನ್ ಸಿನಿಮಾ ಪ್ರಚಾರದಲ್ಲಿ ಅಹಿತಕರ ಘಟನೆ; ಮೂವರು ನ್ಯಾಯಾಂಗ ಬಂಧನಕ್ಕೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2022, 17:41 IST
Last Updated 25 ಡಿಸೆಂಬರ್ 2022, 17:41 IST
   

ಹೊಸಪೇಟೆ (ವಿಜಯನಗರ): ಚಿತ್ರನಟ ದರ್ಶನ್ ತೂಗುದೀಪ ಅವರ 'ಕ್ರಾಂತಿ' ಸಿನಿಮಾ ಪ್ರಚಾರದ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಡಿಸೆಂಬರ್ 18ರಂದು ನಗರದ ವಾಲ್ಮೀಕಿ ವೃತ್ತದಲ್ಲಿ ದರ್ಶನ್ ನಟನೆಯ 'ಕ್ರಾಂತಿ' ಸಿನಿಮಾದ 'ಬೊಂಬೆ.. ಬೊಂಬೆ..' ಹಾಡು ಬಿಡುಗಡೆ ಸಮಾರಂಭ ಏರ್ಪಡಿಸಲಾಗಿತ್ತು. ಈ‌ ಸಂದರ್ಭದಲ್ಲಿ ದರ್ಶನ್ ಮೇಲೆ ಶೂ ಎಸೆಯಲಾಗಿತ್ತು. ಅವರ ಪೋಸ್ಟರ್, ಬ್ಯಾನರ್ ಹರಿಯಲಾಗಿತ್ತು.

ಆಯೋಜಕರು ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅನಂತರ ಘಟನೆಯ ತನಿಖೆಗೆ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದವರ ಪತ್ತೆ ಕಾರ್ಯ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಭಾನುವಾರ ರಾತ್ರಿ ತಿಳಿಸಿದ್ದಾರೆ.

ADVERTISEMENT

ಪಟ್ಟಣ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಬಾಳನಗೌಡ ನೇತೃತ್ವದ ತಂಡದಲ್ಲಿ ಪಿಎಸ್ ಐ ಮುನಿರತ್ನ, ಸಿಬ್ಬಂದಿ ರಾಘವೇಂದ್ರ, ಪ್ರಕಾಶ್ ಕಳಕರೆಡ್ಡಿ, ಶ್ರೀನಿವಾಸ್, ಜಾವೇದ್, ಪರಶುರಾಮನಾಯ್ಕಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.