ADVERTISEMENT

ಹೊಸಪೇಟೆ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2022, 13:56 IST
Last Updated 10 ಮಾರ್ಚ್ 2022, 13:56 IST
   

ಹೊಸಪೇಟೆ (ವಿಜಯನಗರ): ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪೈಕಿ ನಾಲ್ಕು ಕಡೆ ಪಕ್ಷ ಉತ್ತಮ ಸಾಧನೆ ತೋರಿರುವುದರಿಂದ ಬಿಜೆಪಿ ಕಾರ್ಯಕರ್ತರು ಗುರುವಾರ ಸಂಜೆ ನಗರದಲ್ಲಿ ವಿಜಯೋತ್ಸವ ಆಚರಿಸಿದರು.

ಇಲ್ಲಿನ ಪಟೇಲ್‌ ನಗರದ ಬಿಜೆಪಿ ಕಚೇರಿಯಲ್ಲಿ ಸೇರಿದ ಕಾರ್ಯಕರ್ತರು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪರ ಘೋಷಣೆ ಹಾಕಿದರು. ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸಿದರು. ತಮಟೆ ಸದ್ದಿಗೆ ಹೆಜ್ಜೆ ಹಾಕಿದರು. ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತ, ಮಹಾತ್ಮ ಗಾಂಧಿ ವೃತ್ತ, ಮದಕರಿ ನಾಯಕ ವೃತ್ತಕ್ಕೆ ತೆರಳಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ನಗರಸಭೆ ಸದಸ್ಯರಾದ ಜೀವರತ್ನಂ, ರೂಪೇಶ್‌ ಕುಮಾರ್‌, ಮುಖಂಡರಾದ ಸಾಲಿ ಸಿದ್ದಯ್ಯ ಸ್ವಾಮಿ, ಶಂಕರ್‌ ಮೇಟಿ, ಪಂತರ್‌ ಜಯಂತ್‌ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.