ADVERTISEMENT

ಕಾಂಗ್ರೆಸ್ ಪಕ್ಷವು ಜೆಡಿಎಸ್‌ನ ‘ಬಿ’ ಟೀಮ್‌: ಸಚಿವ ಬಿ. ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 10:14 IST
Last Updated 1 ಮಾರ್ಚ್ 2021, 10:14 IST
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟನೆ   

ಹಗರಿಬೊಮ್ಮನಹಳ್ಳಿ: ‘ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷದ ‘ಬಿ’ ಟೀಮ್ ಎನ್ನುವುದು ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸಾಬೀತಾಗಿದೆ’ ಎಂದು ಸಮಾಜ‌ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಬಿಜೆಪಿಯನ್ನು ‘ಬಿ’ ಟೀಮ್‌ ಎಂದು ಕರೆದಿದ್ದ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಸಿಂದಗಿ, ಬಸವ ಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ವಾಲ್ಮೀಕಿ ಸಮಾಜದ ಕುಲಶಾಸ್ತ್ರ ಅಧ್ಯಯನ ಪೂರ್ಣಗೊಂಡಿದೆ. ಪರಿಶಿಷ್ಟ ಪಂಗಡ ಮೀಸಲಾತಿ ಶೇ 7.5 ಕ್ಕೆ ಹೆಚ್ಚಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.