ಹೊಸಪೇಟೆ (ವಿಜಯನಗರ): ‘ನಾನಿನ್ನೂ ಮಾತನಾಡುವ ಮುಹೂರ್ತ ಬಂದಿಲ್ಲ. ಬಂದ ಮೇಲೆ ಮಾತನಾಡುವೆ. ಅಲ್ಲಿಯವರೆಗೆ ಖಾತೆ ಹಂಚಿಕೆ ಬಗ್ಗೆ ನಾನೇನೂ ಹೇಳಲಾರೆ’ ಎಂದು ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದರು.
‘ನೀವು ಎಷ್ಟೇ ಸಲ ಕೇಳಿದರೂ ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಮಂಗಳವಾರ (ಆ.17) ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವಿಚಾರದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.