ADVERTISEMENT

ವಿಜಯನಗರ: ಪೆಟ್ರೋಲ್ ಬಂಕ್ ಆವರಣದಲ್ಲಿ ಓಡಾಡಿದ ಕರಡಿ

​ಪ್ರಜಾವಾಣಿ ವಾರ್ತೆ
Published 4 ಮೇ 2022, 11:31 IST
Last Updated 4 ಮೇ 2022, 11:31 IST
ಕರಡಿಯ ಚಲನವಲನ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಕರಡಿಯ ಚಲನವಲನ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ   

ಕಾನಹೊಸಹಳ್ಳಿ: ಆಹಾರ, ನೀರು ಅರಸಿಕೊಂಡು ವಿಜಯನಗರ ಜಿಲ್ಲೆಯ ಕಾನಹೊಸಹಳ್ಳಿಯ ಚಿಕ್ಕಜೋಗಿಹಳ್ಳಿ ಗ್ರಾಮಕ್ಕೆ ನುಗ್ಗಿದ ಕರಡಿಯೊಂದು ಅಪ್ಪಾಜಿ ಪೆಟ್ರೋಲ್‌ ಬಂಕ್‌ ಆವರಣದಲ್ಲಿ ಓಡಾಡಿದೆ.

ಕರಡಿ ಬಂದಾಗ ಪೆಟ್ರೋಲ್ ಬಂಕ್‌ನಲ್ಲಿ ಯಾರೊಬ್ಬರೂ ಇರಲಿಲ್ಲ.

ಕರಡಿಯ ಚಲನವಲನ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ADVERTISEMENT

ಗುಡೇಕೋಟೆ ಧಾಮದಿಂದ ಕರಡಿಗಳು ಆಗಾಗ ಸಮೀಪದ ಗ್ರಾಮಗಳಿಗೆ ಲಗ್ಗೆ ಇಡುತ್ತಿರುತ್ತವೆ. ರೈತರ ಜಮೀನುಗಳಿಗೆ ನುಗ್ಗುವುದು ಸಾಮಾನ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.