ADVERTISEMENT

ಹೊಸಪೇಟೆ: ಭಾರತ ಬಂದ್- ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 5:40 IST
Last Updated 27 ಸೆಪ್ಟೆಂಬರ್ 2021, 5:40 IST
   

ಹೊಸಪೇಟೆ (ವಿಜಯನಗರ): ವಿವಿಧ ರೈತ ಸಂಘಟನೆಗಳು ಕರೆ ಕೊಟ್ಟಿರುವ ಭಾರತ ಬಂದ್ ಗೆ ಸೋಮವಾರ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆ ಎಂದಿನಂತೆ ಹಾಲು, ದಿನಪತ್ರಿಕೆ ಪೂರೈಕೆಯಾಗಿದೆ. ಬಸ್, ಆಟೊ ಸಂಚಾರ ಸಾಮಾನ್ಯವಾಗಿದೆ.

ಬಹುತೇಕ ಅಂಗಡಿ, ಹೋಟೆಲ್ ಗಳು ಎಂದಿನಂತೆ ಬಾಗಿಲು ತೆರೆದಿದ್ದವು. ಆದರೆ, ರೈತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಬೈಕ್ ಗಳಲ್ಲಿ ಸುತ್ತಾಡಿ ಬಂದ್ ಮಾಡಿಸಿದರು. ತರಕಾರಿ ಮಾರುಕಟ್ಟೆ, ಎಪಿಎಂಸಿ ಎಂದಿನಂತೆ ತೆರೆದಿವೆ.‌ ಜನರ ಓಡಾಟ ಸಾಮಾನ್ಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.