ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ (ಎಸ್ಸಿ) ಮೋರ್ಚಾದಿಂದ ಸೋಮವಾರ ನಗರದಲ್ಲಿ 'ಹರ್ ಘರ್ ತಿರಂಗಾ' ಬೈಸಿಕಲ್ ಜಾಥಾ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಸೈಕಲ್ ಜಾಥಾಗೆ ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಚಾಲನೆ ನೀಡಿದರು.
ಅಂಬೇಡ್ಕರ್ ವೃತ್ತದಿಂದ ಸೈಕಲ್ಗಳಲ್ಲಿ ತ್ರಿವರ್ಣ ಧ್ವಜ ಕಟ್ಟಿಕೊಂಡು ಕಾಲೇಜು ರಸ್ತೆ, ನಾಗಪ್ಪ ಕಟ್ಟೆ, ಸಾಯಿಬಾಬಾ ವೃತ್ತ, ಎಪಿಎಂಸಿ ವೃತ್ತ, ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತದವರೆಗೆ ಘೋಷಣೆಗಳನ್ನು ಕೂಗುತ್ತ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡರು.
ನಗರಸಭೆ ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಸದಸ್ಯ ಜೀವರತ್ನಂ, ಬಿಜೆಪಿ ಮಂಡಲಾಧ್ಯಕ್ಷ ಕಾಸಿಟ್ಟಿ ಉಮಾಪತಿ, ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ಕವಿತಾ ಈಶ್ವರ್ ಸಿಂಗ್, ಎಸ್ಸಿ ಮೋರ್ಚಾ ಅಧ್ಯಕ್ಷ ರಾಘವೇಂದ್ರ ಜೆ.ಬಿ., ಸಿದ್ಧಾರ್ಥ್ ಸಿಂಗ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.