ಹೊಸಪೇಟೆ (ವಿಜಯನಗರ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಭಾನುವಾರ ಸಂಜೆ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
ನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ ಚಾಲನೆ ನೀಡಿದರು. ನಂತರ ಮದಕರಿ ನಾಯಕ ವೃತ್ತ, ಗಾಂಧಿ ವೃತ್ತ, ಮೂರಂಗಡಿ ವೃತ್ತ, ಬಸ್ ನಿಲ್ದಾಣ, ಪುನೀತ್ ರಾಜಕುಮಾರ್ ವೃತ್ತದಿಂದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ತ್ರಿವರ್ಣ ಧ್ವಜ ಹಾಗೂ ಪಂಜುಗಳನ್ನು ಹಿಡಿದುಕೊಂಡು ಹೆಜ್ಜೆ ಹಾಕಿದರು. ಘೋಷಣೆಗಳನ್ನು ಹಾಕಿದರು.
ಬಿಜೆಪಿ ಮಂಡಲ ಅಧ್ಯಕ್ಷ ಕಾಸೆಟ್ಟಿ ಉಮಾಪತಿ, ಪ್ರಧಾನ ಕಾರ್ಯದರ್ಶಿ ಶಂಕರ್ ಮೇಟಿ, ನಗರಸಭೆ ಸದಸ್ಯ ಜೀವರತ್ನಂ, ಸಾಲಿ ಸಿದ್ಧಯ್ಯ ಸ್ವಾಮಿ, ಕವಿತಾ ಈಶ್ವರ್ ಸಿಂಗ್, ಸಿದ್ಧಾರ್ಥ್ ಸಿಂಗ್ ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.