ADVERTISEMENT

ಹೊಸಪೇಟೆ ನಗರಸಭೆ ಚುನಾವಣೆ: ಸಚಿವ ಆನಂದ್‌ ಸಿಂಗ್‌ ಬಿರುಸಿನ ಪ್ರಚಾರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 14:18 IST
Last Updated 22 ಡಿಸೆಂಬರ್ 2021, 14:18 IST
ಸಚಿವ ಆನಂದ್ ಸಿಂಗ್‌ ಅವರು ಬುಧವಾರ ಹೊಸಪೇಟೆಯ 15ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು
ಸಚಿವ ಆನಂದ್ ಸಿಂಗ್‌ ಅವರು ಬುಧವಾರ ಹೊಸಪೇಟೆಯ 15ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದರು   

ಹೊಸಪೇಟೆ (ವಿಜಯನಗರ): ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರು ಬುಧವಾರ ನಗರಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ನಗರದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

2, 3, 4, 15ನೇ ವಾರ್ಡ್‌ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಮತಯಾಚಿಸಿದರು. ‘ಈ ಸಲ ಖಂಡಿತವಾಗಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರೇ ಅಧ್ಯಕ್ಷರಾಗುತ್ತಾರೆ. ವಾರ್ಡ್‌ಗಳಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸಲಾಗುವುದು. ಎಲ್ಲ ವಾರ್ಡ್‌ಗಳಲ್ಲಿ ಮತದಾರರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಮತದಾರರು ಬೆಂಬಲಿಸುತ್ತಾರೆ ಎಂಬ ಭರವಸೆ ಇದೆ’ ಎಂದು ಆನಂದ್‌ ಸಿಂಗ್‌ ಭರವಸೆ ವ್ಯಕ್ತಪಡಿಸಿದರು. ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವುದರಿಂದ ಸಚಿವರು ಅಭ್ಯರ್ಥಿಗಳ ಪರ ಮತಯಾಚನೆಗೆ ಮುಂದಾಗಿದ್ದಾರೆ. ಗುರುವಾರ, ಶುಕ್ರವಾರ ಕೂಡ ವಿವಿಧ ವಾರ್ಡ್‌ಗಳಿಗೆ ಭೇಟಿ ಕೊಡುವ ಕಾರ್ಯಕ್ರಮ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.