ADVERTISEMENT

ಕಾರು ಪಲ್ಟಿ : ಬಾಲಕ ಸಾವು, ನಾಲ್ವರಿಗೆ  ಗಾಯ

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 18:25 IST
Last Updated 23 ಜನವರಿ 2023, 18:25 IST
   

ಹರಪನಹಳ್ಳಿ (ವಿಜಯನಗರ ಜಿಲ್ಲೆ) : ತಾಲ್ಲೂಕಿನ ಕೆ.ಕಲ್ಲಹಳ್ಳಿ ಕ್ರಾಸ್ ಸಮೀಪ ಕಾರೊಂದು ಭಾನುವಾರ ಪಲ್ಟಿಯಾಗಿ ಐದು ವರ್ಷದ ಬಾಲಕ ಸಾವನ್ನಪ್ಪಿ, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಜನಿತ್ ಮೃತ ಬಾಲಕ. ನೈತಿಕ್, ವೆಂಕಟೇಶ್, ಪ್ರದೀಪ, ಶಿವಕುಮಾರ ಗಾಯಗೊಂಡವರು. ಎಲ್ಲರೂ ದಾವಣಗೆರೆಯ ವಿನೋಬ ನಗರದ ಒಂದೇ ಕುಟುಂಬಕ್ಕೆ ಸೇರಿದವರು.

ದಾವಣಗೆರೆಯಿಂದ ಮುಂಡರಗಿಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕೆಎ 17, ಎಂ.ಬಿ.2340 ಸಂಖ್ಯೆ ಕಾರು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.