ADVERTISEMENT

ಬಿಜೆಪಿ ಟೋಪಿ ಧರಿಸದ ಬಿಎಸ್‌ವೈ, ವೇದಿಕೆಗೆ ಬಾರದ ಸಂಘಟನಾ ಕಾರ್ಯದರ್ಶಿ ಸಂತೋಷ್‌

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 13:59 IST
Last Updated 16 ಏಪ್ರಿಲ್ 2022, 13:59 IST
ಬಿಜೆಪಿ ಟೋಪಿ ಧರಿಸದೆ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್. ಯಡಿಯರೂಪ್ಪ
ಬಿಜೆಪಿ ಟೋಪಿ ಧರಿಸದೆ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್. ಯಡಿಯರೂಪ್ಪ   

ಹೊಸಪೇಟೆ: ವಿಜಯನಗರದ ನೆಲದಲ್ಲಿ ಆರಂಭಗೊಂಡ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೂ ಮುನ್ನ ನಡೆದ ಪಕ್ಷದ ಬಾವುಟ ಹಾರಿಸುವ ಕಾರ್ಯಕ್ರಮದಲ್ಲಿ ಮುಖಂಡರೊಬ್ಬರು ಶಾಸಕ ಬಿ.ಎಸ್‌. ಯಡಿಯೂರಪ್ಪನವರಿಗೆ ಬಿಜೆಪಿ ಟೋಪಿ ಹಾಕಲು ಮುಂದಾದರು. ಆದರೆ, ಅವರು ಅದನ್ನು ನಿರಾಕರಿಸಿದರು. ಎಲ್ಲ ಮುಖಂಡರು ಟೋಪಿ ಧರಿಸಿದ್ದರು. ಆದರೆ, ಬಿಎಸ್‌ವೈ ಮಾತ್ರ ಧರಿಸಿರಲಿಲ್ಲ. ಸಭಾ ಕಾರ್ಯಕ್ರಮದಲ್ಲೂ ಟೋಪಿ ಧರಿಸದೇ ಪಾಲ್ಗೊಂಡಿದ್ದರು.

ಇನ್ನು, ಬೆಳಿಗ್ಗೆಯಿಂದ ಎಲ್ಲೆಡೆ ಓಡಾಡಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಎಲ್ಲ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು. ಆದರೆ, ಸಭಾ ಕಾರ್ಯಕ್ರಮದ ವೇದಿಕೆಗೆ ಬರಲಿಲ್ಲ. ನಿರೂಪಕರು ಅವರನ್ನು ಕರೆದರೂ ಕೂಡ ಅವರು ಮೇಲೆ ಬರದೇ ಕಾರ್ಯಕಾರಿಣಿ ಸದಸ್ಯರೊಂದಿಗೆ ಕುಳಿತರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ಕಾಂಗ್ರೆಸ್‌ ಸಂಚಿನ ಪಕ್ಷ. ಅದರಲ್ಲಿ ಅದು ಪರಿಣಿತಿ ಹೊಂದಿದೆ. ಕೆ.ಎಸ್‌. ಈಶ್ವರಪ್ಪ ವಿರುದ್ಧ ಕೂಡ ಕಾಂಗ್ರೆಸ್‌ ಸಂಚು ಮಾಡಿ, ಅವರು ರಾಜೀನಾಮೆ ನೀಡುವಂತೆ ಮಾಡಿದೆ. ಸಂತೋಷ್‌ ಪಾಟೀಲ ಆತ್ಮಹತ್ಯೆಗೆ ಹಲವು ಆಯಾಮಗಳಿವೆ. ಆದರೆ, ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದರು.

ADVERTISEMENT

ಈಶ್ವರಪ್ಪನವರು ಪುನಃ ಮಂತ್ರಿಯಾಗುವರು. ಅವರು ಪಕ್ಷದ ದೊಡ್ಡ ನೇತಾರರು. ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.