ADVERTISEMENT

ಕೋವಿಡ್ ನಿಯಮ ಉಲ್ಲಂಘನೆ; ಎಎಪಿಯ 50 ಜನರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 5:01 IST
Last Updated 13 ಜನವರಿ 2022, 5:01 IST
ಎಎಪಿ ಕಾರ್ಯಕರ್ತರು ಬುಧವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.
ಎಎಪಿ ಕಾರ್ಯಕರ್ತರು ಬುಧವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.    

ಹೊಸಪೇಟೆ (ವಿಜಯನಗರ): ಕೋವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇರೆಗೆ ಆಮ್ ಆದ್ಮಿ ಪಕ್ಷದ (ಎಎಪಿ) 50 ಜನ ಮುಖಂಡರು, ಕಾರ್ಯಕರ್ತರ ವಿರುದ್ಧ ಪೊಲೀಸರು ಬುಧವಾರ ತಡರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎಎಪಿಯಿಂದ ಗೆದ್ದು ಬಿಜೆಪಿ ಸೇರಿದ ನಗರಸಭೆ ಸದಸ್ಯ ಶೇಕ್ ಷಾ ವಲಿ ವಿರುದ್ಧ ನಗರದ ಜಂಬುನಾಥಹಳ್ಳಿ ರಸ್ತೆ ಹಾಗೂ ಅವರ ಮನೆ ಬಳಿ ಎಎಪಿಯ ಮುಖಂಡರು, ಕಾರ್ಯಕರ್ತರು ಕೋವಿಡ್ ನಿಯಮ ಉಲ್ಲಂಘಿಸಿ ಗುಂಪುಗೂಡಿ ಪ್ರತಿಭಟನೆ ನಡೆಸಿದ್ದಾರೆ. ಎಲ್ಲರ ವಿರುದ್ಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ ಎಎಪಿ ಕಾರ್ಯಕರ್ತರು ಪೊರಕೆ ಹಿಡಿದುಕೊಂಡು ಶೇಕ್ ಷಾ ವಲಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಸಚಿವ ಆನಂದ್ ಸಿಂಗ್ ಹಣದ ಆಮಿಷವೊಡ್ಡಿ ಪಕ್ಷದ ಚುನಾಯಿತ ಸದಸ್ಯನನ್ನು ಖರೀದಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.