ADVERTISEMENT

ಹೂವಿನಹಡಗಲಿ: ಬೈಕ್ ಸವಾರನ ಮೇಲೆ ಎರಗಿದ ಚಿರತೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2023, 16:03 IST
Last Updated 19 ಆಗಸ್ಟ್ 2023, 16:03 IST
ಚಿರತೆ ಎರಗಿದ ಸ್ಥಳ
ಚಿರತೆ ಎರಗಿದ ಸ್ಥಳ    

ಹೂವಿನಹಡಗಲಿ: ತಾಲ್ಲೂಕಿನ ಹಿರೇಹಡಗಲಿ-ಮಾಗಳ ಮಾರ್ಗ ಮಧ್ಯೆ ಬೈಕ್ ಸವಾರನ ಮೇಲೆ ಚಿರತೆ ಎರಗಿರುವ ಘಟನೆ ಶನಿವಾರ ಜರುಗಿದೆ.

ಮಾಗಳ ಗ್ರಾಮದ ಯುವಕ ಎಸ್.ಎಂ.ಪ್ರವೀಣ ಚಿರತೆ ದಾಳಿಯಿಂದ ಗಾಯಗೊಂಡು ಹಿರೇಹಡಗಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಕ್ ನಲ್ಲಿ ಹೊರಟಿದ್ದ ಯುವಕನ ಮೇಲೆ ಚಿರತೆ ಏಕಾಏಕಿ ಎರಗಿದೆ. ನಿಯಂತ್ರಣ ತಪ್ಪಿ ಯುವಕ ಕೆಳಗೆ ಬೀಳುತ್ತಿದ್ದಂತೆ ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವವರು ಕೂಗಿಕೊಂಡಾಗ ಚಿರತೆ ಅಲ್ಲಿಂದ ಓಡಿ ಹೋಗಿದೆ.

ಈ ಪ್ರದೇಶದಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಇಲ್ಲಿ ಓಡಾಡುವ ಜನರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆಯವರು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.