ADVERTISEMENT

ಮುಖ್ಯ ಚುನಾವಣಾಧಿಕಾರಿ ಹಂಪಿ ಭೇಟಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2021, 16:27 IST
Last Updated 23 ಮಾರ್ಚ್ 2021, 16:27 IST
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ಮಂಗಳವಾರ ಕುಟುಂಬ ಸದಸ್ಯರೊಂದಿಗೆ ಹಂಪಿ ವಿರೂಪಾಕ್ಷೇಶ್ವರ ದೇಗುಲಕ್ಕೆ ಭೇಟಿ ನೀಡಿದರು
ರಾಜ್ಯದ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ಮಂಗಳವಾರ ಕುಟುಂಬ ಸದಸ್ಯರೊಂದಿಗೆ ಹಂಪಿ ವಿರೂಪಾಕ್ಷೇಶ್ವರ ದೇಗುಲಕ್ಕೆ ಭೇಟಿ ನೀಡಿದರು   

ಹೊಸಪೇಟೆ (ವಿಜಯನಗರ): ರಾಜ್ಯದ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ಮಂಗಳವಾರ ಹಂಪಿಗೆ ಭೇಟಿ ನೀಡಿದರು.

ಕುಟುಂಬ ಸಮೇತ ಬಂದಿರುವ ಅವರು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇಗುಲ, ಕಲ್ಲಿನ ರಥ, ಸಪ್ತಸ್ವರ ಮಂಟಪ, ಉಗ್ರನರಸಿಂಹ ಸ್ಮಾರಕಗಳನ್ನು ಕಣ್ತುಂಬಿಕೊಂಡರು.

ವಿರೂಪಾಕ್ಷ ದೇವಾಲಯದ ಆವರಣದಲ್ಲಿನ ಆನೆ ‘ಲಕ್ಷ್ಮಿ’ಯಿಂದ ಆಶೀರ್ವಾದ ಪಡೆದರು. ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದರು. ಬುಧವಾರ (ಮಾ.24) ಕೂಡ ಹಂಪಿ ಪ್ರವಾಸ ಮುಂದುವರೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.