ಹೊಸಪೇಟೆ: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ಕೃತ್ಯವನ್ನು ಸಿಪಿಎಂ ತಾಲ್ಲೂಕು ಸಮಿತಿ ಖಂಡಿಸಿದ್ದು, ಇದು
ಕೋಮುವಾದಿ ಶಕ್ತಿಗಳು ಮನುವಾದಿ ವಿಷ ತುಂಬುತ್ತಿರುವುದಕ್ಕೆ ಮತ್ತೊಂದು ಉದಾಹರಣೆ ಎಂದು ಹೇಳಿದೆ.
ಸರ್ಕಾರವು ಅಸಹಿಷ್ಣುತೆ ಹರಡುವ ವ್ಯಕ್ತಿ ಮತ್ತು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಮತ ವ್ಯಕ್ತಪಡಿಸುವ ಹಕ್ಕನ್ನು ರಕ್ಷಿಸಬೇಕು ಎಂದು ಪಕ್ಷದ ಕಾರ್ಯದರ್ಶಿ ಎನ್.ಯಲ್ಲಾಲಿಂಗ ಒತ್ತಾಯಿಸಿದ್ದಾರೆ.
ಎಸ್ಎಫ್ಐ ಖಂಡನೆ: ಭಾರತ ವಿದ್ಯಾರ್ಥಿ ಫೆಡರೇಷನ್ ಕೂಡ ಘಟನೆ ಖಂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.