ADVERTISEMENT

ಕಾಂಗ್ರೆಸ್ಸಿಗರೇ ಜಡ್ಜ್, ಲಾಯರ್ ಎಲ್ಲ ಆಗಿದ್ದಾರೆ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 8:34 IST
Last Updated 16 ಏಪ್ರಿಲ್ 2022, 8:34 IST
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ   

ಹೊಸಪೇಟೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಹಾಗೂ ಕಾಂಗ್ರೆಸ್ಸಿನವರು ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿನ ವಿಚಾರದಲ್ಲಿ ಜಡ್ಜ್, ಲಾಯರ್, ಪ್ರಾಸಿಕ್ಯೂಟರ್ ಸೇರಿದಂತೆ ಎಲ್ಲ ಅವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಗಿ ಹೇಳಿದರು.

ಸಂತೋಷ್ ಪಾಟೀಲ ಸಾವಿನ ನಂತರ ಪ್ರಕರಣ ದಾಖಲಾಗಿದೆ. ಪ್ರಾಮಾಣಿಕ, ಪಾರದರ್ಶಕವಾಗಿ ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಗಣಪತಿ ಅವರು ಕೆ.ಜೆ. ಜಾರ್ಜ್ ವಿರುದ್ಧ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ, ಅವರ ವಿರುದ್ಧ ಎಫ್ ಐ ಆರ್ ನಲ್ಲಿ ಹೆಸರಿರಲಿಲ್ಲ. ಇವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಎಲ್ಲಿದೆ ಎಂದು ಇಲ್ಲಿ ಸುದ್ದಿಗಾರರನ್ನು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT