ಹೊಸಪೇಟೆ (ವಿಜಯನಗರ): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಿಂದ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಸಹ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂಬ ಸಂಕಲ್ಪ ಮಂಗಳವಾರ ನಗರದಲ್ಲಿ ನಡೆದ ಹೊಸಪೇಟೆ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಮಾಡಲಾಯಿತು.
ಕೆ.ಪಿ.ಸಿ.ಸಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಅಬ್ದುಲ್ ವಹಾಬ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕೆಂದರೆ ಸಂಘಟನೆ ಅಗತ್ಯ. ಅದಕ್ಕಾಗಿ ಈಗಿನಿಂದಲೇ ಕಾರ್ಯತತ್ಪರರಾಗಬೇಕು. ಬಿಜೆಪಿಯ ಜನವಿರೋಧಿ ನೀತಿಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು. ಹೈಕಮಾಂಡ್ ಯಾರಿಗೇ ಟಿಕೆಟ್ ಘೋಷಿಸಿದರೂ ಎಲ್ಲರೂ ಅವರ ಗೆಲುವಿಗೆ ಒಂದಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಕೆ.ಪಿ.ಸಿ.ಸಿ. ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ಘೋರ್ಪಡೆ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಬೂತ್ ಸಮಿತಿ ಕಾರ್ಯಕರ್ತರು ಒಟ್ಟಾಗಿ ಸೇರಿ ಚುನಾವಣೆ ಮಾಡಿದರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬಹುದು ಎಂದು ಹೇಳಿದರು.
ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಪಕ್ಷದ ಉಸ್ತುವಾರಿ ಡಾ. ಎಲ್. ಹನುಮಂತಯ್ಯ ಅವರ ಸೂಚನೆ ಮೇರೆಗೆ ಸಭೆ ನಡೆಸಲಾಗಿದೆ. ಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿರುವ ಆಕಾಂಕ್ಷಿಗಳ ಪಟ್ಟಿ ಕೊಡಬೇಕೆಂದು ತಿಳಿಸಿದ್ದಾರೆ. ಎಲ್ಲರೂ ಲಿಖಿತ ರೂಪದಲ್ಲಿ ಬರೆದು ಕೊಡಬೇಕು ಎಂದು ತಿಳಿಸಿದರು.
ಮುಖಂಡರಾದ ರಾಜಶೇಖರ್ ಹಿಟ್ನಾಳ್, ಎಚ್.ಎನ್.ಎಫ್. ಇಮಾಮ್ ನಿಯಾಜಿ, ದೀಪಕ್ ಕುಮಾರ್ ಸಿಂಗ್, ಗುಜ್ಜಲ್ ನಾಗರಾಜ, ಕುರಿ ಶಿವಮೂರ್ತಿ, ನಿಂಬಗಲ್ ರಾಮಕೃಷ್ಣ, ವಿನಾಯಕ ಶೆಟ್ಟರ್, ಎಲ್.ಸಿದ್ದನಗೌಡ, ಎಂ.ಸಿ.ವೀರಸ್ವಾಮಿ, ಭಾಗ್ಯಲಕ್ಷ್ಮೀ ಭರಾಡೆ, ಕೆ. ಬಡಾವಲಿ, ಡಿ.ವೆಂಕಟರಮಣ, ಬಾಬ, ರಘು ಗುಜ್ಜಲ್, ಮುಕ್ತಿಯಾರ್ ಪಾಷ, ಸಿ.ಖಾಜಾ ಹುಸೇನ್, ಮುನ್ನಿ ಕಾಸಿಂ, ಯೋಗಲಕ್ಷ್ಮೀ, ಬಾಬು, ವೀರಭದ್ರ ನಾಯಕ, ಕೊಟಗಿನಾಳ್ ಹುಲುಗಪ್ಪ, ರಾಮನಗೌಡ, ವಿಜಯಕುಮಾರ್ ಇದ್ದರು,
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.