ADVERTISEMENT

ಕಾಂಗ್ರೆಸ್‌ ‘ಯುವ ಕ್ರಾಂತಿ’ ಆರಂಭ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 13:52 IST
Last Updated 27 ಸೆಪ್ಟೆಂಬರ್ 2021, 13:52 IST
ಹೊಸಪೇಟೆಯಲ್ಲಿ ಸೋಮವಾರ ನಡೆದ ಕಾರ್ಯಾಗಾರದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿ.ವಿ ಮಾತನಾಡಿದರು
ಹೊಸಪೇಟೆಯಲ್ಲಿ ಸೋಮವಾರ ನಡೆದ ಕಾರ್ಯಾಗಾರದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿ.ವಿ ಮಾತನಾಡಿದರು   

ಹೊಸಪೇಟೆ(ವಿಜಯನಗರ): ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ‘ಯುವ ಕ್ರಾಂತಿ ಬುನಾದಿ’ ಪದಾಧಿಕಾರಿಗಳ ನಾಯಕತ್ವ ತರಬೇತಿ ಕಾರ್ಯಾಗಾರ ಸೋಮವಾರ ನಗರದಲ್ಲಿ ಆರಂಭಗೊಂಡಿತು.

ಮೂರು ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಈ ಕಾರ್ಯಾಗಾರದಲ್ಲಿ ರಾಜ್ಯ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಪಕ್ಷ ಸಂಘಟನೆಯ ಕುರಿತು ತರಬೇತಿ ನೀಡಲಾಗುತ್ತದೆ.

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿ.ವಿ, ರಕ್ಷ ರಾಮಯ್ಯ.ಎಸ್, ರಾಷ್ಟ್ರೀಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲವಾರು, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಂ ಲಾಂಬಾ, ಅನಿಲ್‌ ಕುಮಾರ್ ಯಾದವ್, ಕಾರ್ಯದರ್ಶಿಗಳಾದ ವಿದ್ಯಾ ಬಾಲಕೃಷ್ಣ, ಸುರಭಿ ದ್ವಿವೇದಿ, ಸುಮಯ ತಬ್ರಿಜ್, ಜಿಲ್ಲಾ ಅಧ್ಯಕ್ಷ ಸಿದ್ದು ಹಳ್ಳೆಗೌಡ, ನಗರ ಘಟಕದ ಅಧ್ಯಕ್ಷ ಭರತ್ ಕುಮಾರ್.ಸಿ.ಆರ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.