ADVERTISEMENT

ಹೊಸಪೇಟೆ: ‘ಸೋಂಕಿತರು ಹೊರಗೆ ತಿರುಗಾಡಿದರೆ ಆರೈಕೆ ಕೇಂದ್ರಕ್ಕೆ’

​ಪ್ರಜಾವಾಣಿ ವಾರ್ತೆ
Published 13 ಮೇ 2021, 8:18 IST
Last Updated 13 ಮೇ 2021, 8:18 IST

ಹೊಸಪೇಟೆ (ವಿಜಯನಗರ): ‘ಕೋವಿಡ್‌–19 ಸೋಂಕು ದೃಢಪಟ್ಟ ನಂತರ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರು ಹೊರಗೆ ತಿರುಗಾಡಿದರೆ ಅಂತಹವರನ್ನು ನಗರ ಹೊರವಲಯದ ಜಂಬುನಾಥ ಗುಡ್ಡ ಬಳಿಯಿರುವ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಇರಿಸಲಾಗುವುದು’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ಗುರುವಾರ ಎಚ್ಚರಿಕೆ ನೀಡಿದ್ದಾರೆ.

‘ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದೆ. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರು ಅನಗತ್ಯವಾಗಿ ಹೊರಗೆ ಓಡಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಸೋಂಕಿತರು ಒಂದುವೇಳೆ ಹೊರಗೆ ತಿರುಗಾಡುತ್ತಿದ್ದರೆ ಅವರ ಹೆಸರು, ವಿಳಾಸವನ್ನು ಮೊಬೈಲ್ ಸಂಖ್ಯೆ 9740563535ಗೆ ಮಾಹಿತಿ ನೀಡಬಹುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT