ಹೊಸಪೇಟೆ (ವಿಜಯನಗರ): ‘ಕೋವಿಡ್ ಪ್ರಕರಣಗಳ ಮೇಲೆ ತೀವ್ರ ನಿಗಾ ಇಡುವುದಕ್ಕಾಗಿ ನಗರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಟ್ಟಡದ ಎರಡನೇ ಮಹಡಿಯಲ್ಲಿ ಕೋವಿಡ್ ವಾರ್ ರೂಂ ಆರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ತಿಳಿಸಿದ್ದಾರೆ.
‘ಕೋವಿಡ್ ಕಂಟ್ರೋಲ್ ರೂಂ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ.ಸಹಾಯವಾಣಿ ಸಂಖ್ಯೆ:08394-200108 ಗೆ ಸಾರ್ವಜನಿಕರು ಕರೆ ಮಾಡಿ ಕೋವಿಡ್ಗೆ ಸಂಬಂಧಿಸಿದ ದೂರು, ಸಮಸ್ಯೆಗಳ ಬಗ್ಗೆ ತಿಳಿಸಬಹುದು. ಕೋವಿಡ್ ಪ್ರಕರಣಗಳು ಮತ್ತು ಬೆಡ್ಗಳ ಬಗ್ಗೆ ಮಾಹಿತಿಯನ್ನು ಈ ಸಹಾಯವಾಣಿಗೆ ಕರೆ ಮಾಡಿ ತಿಳಿದು ನೆರವು ಪಡೆಯಬಹುದು’ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗದಂತೆ ನಿಯಂತ್ರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.