ADVERTISEMENT

ಹೊಸಪೇಟೆ: ಡಿಸಿ ಅನಿರುದ್ಧ್‌ಗೆ ಜಿಪಂ ಸಿಇಒ ಹೆಚ್ಚುವರಿ ಹೊಣೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 16:55 IST
Last Updated 7 ಅಕ್ಟೋಬರ್ 2021, 16:55 IST
ಡಿಸಿ ಅನಿರುದ್ಧ್‌ ಪಿ. ಶ್ರವಣ್‌
ಡಿಸಿ ಅನಿರುದ್ಧ್‌ ಪಿ. ಶ್ರವಣ್‌   

ಹೊಸಪೇಟೆ: ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಅ. 1ರಂದು ಕೆ.ಎಂ. ಗಾಯತ್ರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಅವರು ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನವೇ ಅವರ ವರ್ಗಾವಣೆ ಆದೇಶ ರದ್ದುಗೊಳಿಸಿದೆ.

ಸೆ. 30ರಂದು ಅನಿರುದ್ಧ್‌ ಶ್ರವಣ್‌ ಜಿಲ್ಲಾಧಿಕಾರಿ, ಅರುಣ್‌ ಕೆ., ಅವರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು. ಅದಾದ ಒಂದು ದಿನದ ನಂತರ ಜಿಲ್ಲಾ ಪಂಚಾಯಿತಿಗೆ ಸಿಇಒ ನೇಮಕ ಮಾಡಿತ್ತು. ಡಿಸಿ, ಎಸ್ಪಿ ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.