ADVERTISEMENT

ಹಂಪಿ ಉತ್ಸವ ಸ್ಥಳ ಪರಿಶೀಲಿಸಿದ ಡಿಸಿ, ಎಸ್ಪಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 15:47 IST
Last Updated 28 ನವೆಂಬರ್ 2022, 15:47 IST
ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಅವರು ಸೋಮವಾರ ಹಂಪಿಗೆ ಭೇಟಿ ನೀಡಿದರು
ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಅವರು ಸೋಮವಾರ ಹಂಪಿಗೆ ಭೇಟಿ ನೀಡಿದರು   

ಹೊಸಪೇಟೆ (ವಿಜಯನಗರ): ‘ಹಂಪಿ ಉತ್ಸವ’ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಅವರು ಸೋಮವಾರ ಹಂಪಿಯಲ್ಲಿ ಸ್ಥಳ ಪರಿಶೀಲಿಸಿದರು.

ಜನವರಿಯಲ್ಲಿ ಹಂಪಿ ಉತ್ಸವ ಸಂಘಟಿಸಲು ನಿರ್ಧರಿಸಲಾಗಿದ್ದು, ಅದರ ಪೂರ್ವಸಿದ್ಧತೆಯ ಭಾಗವಾಗಿ ಇಬ್ಬರೂ ಹಂಪಿಗೆ ಭೇಟಿ ನೀಡಿ ಮೂಲಸೌಕರ್ಯ, ಸ್ಥಳ ಪರಿಶೀಲಿಸಿದರು.

ಹಂಪಿ ರಥಬೀದಿ, ತುಂಗಭದ್ರಾ ನದಿ ಸ್ನಾನಘಟ್ಟ, ವಿರೂಪಾಕ್ಷೇಶ್ವರ ದೇವಸ್ಥಾನ, ವೇದಿಕೆ ನಿರ್ಮಾಣದ ಜಾಗ, ಸಂಚಾರ ವ್ಯವಸ್ಥೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ವಸ್ತು ಪ್ರದರ್ಶನ ಆಯೋಜನೆ ಸೇರಿದಂತೆ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.