ADVERTISEMENT

ಅಪಘಾತ: ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು

​ಪ್ರಜಾವಾಣಿ ವಾರ್ತೆ
Published 13 ಜೂನ್ 2021, 13:09 IST
Last Updated 13 ಜೂನ್ 2021, 13:09 IST
ಎಂಜಿನಿಯರ್ ಅಮರ್ ಬಿರಾದಾರ
ಎಂಜಿನಿಯರ್ ಅಮರ್ ಬಿರಾದಾರ    

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಶಿವಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭಾನುವಾರ ಬೆಳಗಿನ ಜಾವ ಐದು ಗಂಟೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಜಿನಿಯರ್ ಅಮರ್ ಬಿರಾದಾರ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಡೊಂಗರಗಿ ಗ್ರಾಮದ ನಿವಾಸಿಯಾಗಿದ್ದ ಅಮರ್, ಬೆಂಗಳೂರಿನಲ್ಲಿ‌ ಸಿವಿಲ್ ಎಂಜಿನಿಯರ್ ಆಗಿ ಕೆಲಸ‌ ನಿರ್ವಹಿಸುತ್ತಿದ್ದರು. ಒಂದುವರೆ ತಿಂಗಳ ಹಿಂದೆ ಮದುವೆಯಾಗಿದ್ದರು. ಪತ್ನಿಯನ್ನು ಕರೆತರಲು ಶನಿವಾರ ರಾತ್ರಿ ಸ್ವತಃ ಅವರೇ ಕಾರು ಓಡಿಸಿಕೊಂಡು ಸ್ವಗ್ರಾಮಕ್ಕೆ ಹೊರಟಿದ್ದರು. ಭಾನುವಾರ ನಸುಕಿನಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಅಮರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿ, ಅವರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.