ADVERTISEMENT

ಹೊಸಪೇಟೆ: ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 12:16 IST
Last Updated 31 ಮಾರ್ಚ್ 2022, 12:16 IST

ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯದ ಬಲದಂಡೆ ಕೆಳಮಟ್ಟದ ಕಾಲುವೆ (ಎಲ್‌ಎಲ್‌ಸಿ), ಎಡದಂಡೆ ಮುಖ್ಯ ಕಾಲುವೆಗೆ (ಎಲ್‌ಬಿಎಂಸಿ) ಏ. 10ರಿಂದ 20ರ ವರೆಗೆ ನೀರು ಹರಿಸಬೇಕೆಂದು ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮ ಗೌಡ ಆಗ್ರಹಿಸಿದ್ದಾರೆ.

ಗುರುವಾರ ಕಾಡಾ ಅಧ್ಯಕ್ಷ ತಿಪ್ಪೇರುದ್ರ ಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ. ರೈತರು ತಡವಾಗಿ ಭತ್ತ ನಾಟಿ ಮಾಡಿದ್ದಾರೆ. ನೀರಿನ ಅಗತ್ಯವಿದೆ. ಏ.10ರಿಂದ 20ರ ವರೆಗೆ ಆಂಧ್ರ ಪ್ರದೇಶದ ಪಾಲಿನ ನೀರು ಹರಿಸಲಾಗುತ್ತದೆ. ಈ ವೇಳೆ ಸ್ಥಳೀಯ ರೈತರ ಗದ್ದೆಗೂ ನೀರು ಹರಿಸಬೇಕೆಂದು ಆಗ್ರಹಿಸಿದ್ದಾರೆ. ಅಧಿಕಾರಿಗಳು, ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT