ADVERTISEMENT

‘ರಾಜ್ಯಪಾಲರಿಂದ ಪ್ರಜಾತಂತ್ರ ವ್ಯವಸ್ಥೆ ಹಾಳು’

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 14:31 IST
Last Updated 29 ಆಗಸ್ಟ್ 2024, 14:31 IST
ಹಗರಿಬೊಮ್ಮನಹಳ್ಳಿಯ ಬಸವೇಶ್ವರ ವೃತ್ತದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು
ಹಗರಿಬೊಮ್ಮನಹಳ್ಳಿಯ ಬಸವೇಶ್ವರ ವೃತ್ತದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು   

ಹಗರಿಬೊಮ್ಮನಹಳ್ಳಿ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಜಾತಂತ್ರ ವ್ಯವಸ್ಥೆಯನ್ನು ಸಂಪೂರ್ಣ ಹಾಳುಮಾಡುತ್ತಿದೆ’ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ತಾಲ್ಲೂಕು ಘಟಕದ ಕಾರ್ಯದರ್ಶಿ ಎಸ್.ಅನ್ವರ್ ಭಾಷಾ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ರಾಜ್ಯಪಾಲರ ವಿರುದ್ಧ ಬಸವೇಶ್ವರ ವೃತ್ತದ ಬಳಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

ಮುಖಂಡರಾದ ಕೆ.ಗಂಗಾಧರ, ಕೆ.ಅಂಜಿನಪ್ಪ ಮಾತನಾಡಿದರು. ಜಿ.ವಿ.ಶಿವಕುಮಾರ್, ಮುದಿಯಪ್ಪ, ಕೆ.ಶಿವ, ಆನಂದ, ಕೆ.ಗಾದಿಲಿಂಗಪ್ಪ, ರಾಮಪ್ಪ, ರಾಮಲಿ, ಸುದೀಪ್, ವೆಂಕಟೇಶ್, ರಾಘವೇಂದ್ರ, ಲಕ್ಷ್ಮಣ, ಭೀಮಪ್ಪ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.