ADVERTISEMENT

ಹೊಸಪೇಟೆ| ನಾಯಿ ಕಡಿತದಿಂದ ಬಾಲಕಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 20 ಜನವರಿ 2023, 11:28 IST
Last Updated 20 ಜನವರಿ 2023, 11:28 IST
ನಾಯಿಗಳ ಕಡಿತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ
ನಾಯಿಗಳ ಕಡಿತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ    

ಹೊಸಪೇಟೆ (ವಿಜಯನಗರ): ಬೀದಿ ನಾಯಿ ಕಚ್ಚಿದ್ದರಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಚಿತ್ತವಾಡ್ಗಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ವೇದಶ್ರೀ ಕೊಟ್ರೇಶ (9) ಗಾಯಗೊಂಡ ಬಾಲಕಿ. ಮೂರನೇ ತರಗತಿಯಲ್ಲಿ ಓದುತ್ತಿರುವ ವೇದಶ್ರೀ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ನಾಯಿ ದಾಳಿ ನಡೆಸಿ ಮುಖದ ಮೇಲೆ ಕಚ್ಚಿ ಗಾಯಗೊಳಿಸಿದೆ. ಸ್ಥಳೀಯರು ಗಮನಿಸಿ ನಾಯಿಯನ್ನು ಹೊಡೆದು ಓಡಿಸಿದ್ದಾರೆ.

ಘಟನೆಯನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ನಗರಸಭೆ ಪೌರಾಯುಕ್ತರು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದಾರೆ.
ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.