ADVERTISEMENT

ವಿಜಯನಗರ | ಕೌಟುಂಬಿಕ ಕಲಹ: ಅವಹೇಳನ ಮಾಡಿದ ತಂದೆಯ ಕೊಲೆ ಮಾಡಿದ ಮಗ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 9:12 IST
Last Updated 5 ಸೆಪ್ಟೆಂಬರ್ 2022, 9:12 IST
ಬಂಧಿತ ನಾಗರಾಜ
ಬಂಧಿತ ನಾಗರಾಜ   

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಂದೆಯ ತಲೆಗೆ ಮಗ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕುದುರೆಡವು ಗ್ರಾಮದಲ್ಲಿ ಭಾನುವಾರ ನಡೆದಿದೆ.

ತಿಪ್ಪೇರುದ್ರಪ್ಪ (70) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ನಾಗರಾಜ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಿಪ್ಪೇರುದ್ರಪ್ಪ ಹಾಗೂ ನಾಗರಾಜ್ ನಡುವೆ ಕೌಟುಂಬಿಕ ಕಲಹವಿತ್ತು. ಭಾನುವಾರ ರಾತ್ರಿ ನಾಗರಾಜ್‌ ಊಟಕ್ಕೆ ಮನೆಗೆ ಬಂದಾಗ, ತಂದೆ ಅವಹೇಳನ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ನಾಗರಾಜ್‌ ಕಟ್ಟಿಗೆಯಿಂದ ತಂದೆಯ ಹಣೆ, ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡಿದ್ದ ತಿಪ್ಪೇರುದ್ರಪ್ಪ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಗುಡೇಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.