ADVERTISEMENT

ಎಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

​ಪ್ರಜಾವಾಣಿ ವಾರ್ತೆ
Published 30 ಮೇ 2023, 5:49 IST
Last Updated 30 ಮೇ 2023, 5:49 IST
ಈಜಲು ತೆರಳಿದ ನಾಲ್ವರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು
ಈಜಲು ತೆರಳಿದ ನಾಲ್ವರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು   

ಹರಪನಹಳ್ಳಿ : ತಾಲ್ಲೂಕಿನ ನಂದಿಬೇವೂರು ಗ್ರಾಮದ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಎಂಜಿನಿಯರಿಂಗ್  ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಜರುಗಿದೆ.

ಸಂಡೂರು ತಾಲ್ಲೂಕು ಯಶವಂತ ನಗರದ ಅಂಜಿ ಅಜಯಕುಮಾರ (22) ಮೃತರು. ಬೆಂಗಳೂರಿನ ಕಾಲೇಜವೊಂದರಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದು, ನಂದಿಬೇವೂರು ಗ್ರಾಮದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಭಾನುವಾರ ಅಜಯ್ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ. ಗೆಳೆಯರು ಕೆರೆ ದಡದ ಮೇಲೆ ಕುಳಿತಿದ್ದಾಗ, ನೀರಿಗಿಳಿದು ಈಜು ಕಲಿಯುತ್ತಿದ್ದಾಗ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹರಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT