ADVERTISEMENT

ಆನಂದ್ ಸಿಂಗ್ ಅವರಿಂದ ಬೆನ್ನಿಗೆ ಚೂರಿ: ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 7:40 IST
Last Updated 17 ಜನವರಿ 2023, 7:40 IST
   

ಹೊಸಪೇಟೆ (ವಿಜಯನಗರ): 'ಯಾವ ಪಕ್ಷದಿಂದ ಗೆದ್ದಿದ್ದಾರೆ ಅದರ ಬೆನ್ನಿಗೆ ಚೂರಿ ಹಾಕಿದ್ದಾರೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಹೆಸರು ಹೇಳದೆ ಟೀಕಿಸಿದರು.

ಇಲ್ಲಿ ಮಂಗಳವಾರ ಏರ್ಪಡಿಸಿರುವ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ರಾಜ್ಯದಲ್ಲಿ ಸರ್ಕಾರ ಮಾಡಿದೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ. ಇವರನ್ನು ಮನೆಗೆ ಕಳಿಸಬೇಕಲ್ಲವೇ? ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಪ್ರತಿಯೊಂದರಲ್ಲೂ ಹಗರಣಗಳು ನಡೆದಿವೆ. ಜಾತಿ, ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸತತ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಈ ಸಲದ ಚುನಾವಣೆಯಲ್ಲಿ ಅವರು ಸೋಲುವುದು ಖಚಿತ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.