ADVERTISEMENT

ಕಾಕುಬಾಳು: ರೈತ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2021, 12:48 IST
Last Updated 11 ಮಾರ್ಚ್ 2021, 12:48 IST

ವಿಜಯನಗರ (ಹೊಸಪೇಟೆ): ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ, ಸಾಲದ ಬಾಧೆಗೆ ಬೇಸತ್ತು ತಾಲ್ಲೂಕಿನ ಕಾಕುಬಾಳು ಗ್ರಾಮದ ರೈತ ಗೌರಿಪುರದ ಮಂಜುನಾಥ (40) ಬುಧವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮಂಜುನಾಥ ಅವರು ಸಹಕಾರಿ ಬ್ಯಾಂಕಿನಲ್ಲಿ ₹5 ಲಕ್ಷ ಸಾಲ ಮಾಡಿದ್ದರು. ಎರಡು ಎಕರೆಯಲ್ಲಿ ಬೆಳೆದಿದ್ದ ಟೊಮೊಟೊಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಕ್ಕಿರಲಿಲ್ಲ. ನಷ್ಟಕ್ಕೆ ಒಳಗಾಗಿ ಮನನೊಂದಿದ್ದ ಅವರು ಬುಧವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಜೀವ ತ್ಯಜಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗಾದಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT