ಹೊಸಪೇಟೆ (ವಿಜಯನಗರ): ನಗರದ ಕೇಂದ್ರ ಬಸ್ ನಿಲ್ದಾಣ ಎದುರಿನ ಉಡುಪಿ ಹೋಟೆಲ್ನಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿತು.
ಸಕಾಲಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದರಿಂದ ಬೇರೆಡೆ ಬೆಂಕಿಯ ಕೆನ್ನಾಲಿಗೆ ಚಾಚಲಿಲ್ಲ. ‘ಹೋಟೆಲ್ನ ಅಡುಗೆ ಮನೆಯ ಬಾಯ್ಲರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿತ್ತು. ಅಗ್ನಿಶಾಮಕ ದಳದವರು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಬಂದು, ಬೆಂಕಿ ಬೇರೆಡೆ ಹೊತ್ತಿಕೊಳ್ಳದಂತೆ ನಿಯಂತ್ರಿಸಿದರು. ತಕ್ಷಣವೇ ಅಲ್ಲಿದ್ದ ಹತ್ತಕ್ಕೂ ಹೆಚ್ಚು ಸಿಲಿಂಡರ್ಗಳನ್ನು ಸ್ಥಳಾಂತರಿಸಲಾಯಿತು. ಇಲ್ಲದಿದ್ದಲ್ಲಿ ದೊಡ್ಡ ದುರಂತ ಸಂಭವಿಸುತ್ತಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.