ADVERTISEMENT

ಮಾಜಿ ಐಎಎಸ್‌ ಅಧಿಕಾರಿ ಲಕ್ಷ್ಮಿನಾರಾಯಣ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 14:19 IST
Last Updated 6 ಮಾರ್ಚ್ 2023, 14:19 IST
   

ಹೊಸಪೇಟೆ: ಮಾಜಿ ಐಎಎಸ್‌ ಅಧಿಕಾರಿ ಲಕ್ಷ್ಮಿನಾರಾಯಣ ಅವರು ಸೋಮವಾರ ಸಂಜೆ ಇಲ್ಲಿ ಬಿಜೆಪಿ ಸೇರ್ಪಡೆಯಾದರು.

ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಲಕ್ಷ್ಮಿನಾರಾಯಣ ಅವರಿಗೆ ಬಿಜೆಪಿ ಬಾವುಟ ಕೊಟ್ಟು, ಪಕ್ಷದ ಚಿಹ್ನೆಯಿರುವ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

‘ಬಿಜೆಪಿಯ ಪ್ರಣಾಳಿಕೆ, ಯೋಜನೆ ನೋಡಿಕೊಂಡು ಆ ಪಕ್ಷಕ್ಕೆ ಸೇರಿದ್ದೇನೆ’ ಎಂದು ಲಕ್ಷ್ಮಿನಾರಾಯಣ ತಿಳಿಸಿದರು.

ADVERTISEMENT

ಕಳೆದ ಕೆಲವು ತಿಂಗಳಿಂದ ಲಕ್ಷ್ಮಿನಾರಾಯಣ ಅವರು ಜಿಲ್ಲೆಯ ಹಗರಿಬೊಮ್ಮನಹಳ್ಳಿ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಚಿಹ್ನೆಯಡಿ ಪ್ರಚಾರ ಕಾರ್ಯ ಕೈಗೊಂಡಿದ್ದರು. ಈಗ ಅಧಿಕೃತವಾಗಿ ಪಕ್ಷ ಸೇರಿದ್ದಾರೆ.

‘ಪ್ರತಿಯೊಂದು ಕ್ಷೇತ್ರದಲ್ಲಿ ಶ್ರಮ ವಹಿಸಿ ದುಡಿದು ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸೋಣ’ ಎಂದು ಸಚಿವ ಆನಂದ್‌ ಸಿಂಗ್‌ ಹೇಳಿದರು.

ಸಂಸದ ವೈ.ದೇವೇಂದ್ರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಮಂಡಲ ಅಧ್ಯಕ್ಷ ಕಾಸೆಟ್ಟಿ ಉಮಾಪತಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.