
ಪ್ರಜಾವಾಣಿ ವಾರ್ತೆ
ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಹೊಸಪೇಟೆ (ವಿಜಯನಗರ): ನಿದ್ರೆ ಮಾತ್ರೆ ಸೇವಿಸಿ ಒಂದೇ ಮನೆಯ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಇಲ್ಲಿನ ಜಂಬುನಾಥ ಹಳ್ಳಿ ರಸ್ತೆಯಲ್ಲಿ ನಡೆದಿದ್ದು, ಒಬ್ಬರನ್ನು ಹೊರತುಪಡಿಸಿ ಮೂವರ ಸ್ಥಿತಿ ಗಂಭೀರವಾಗಿದೆ.
‘ಗಂಗಮ್ಮ(35), ಪಾರ್ವತಿ(45), ಅಭಿಷೇಕ(23) ಹಾಗೂ ಅಶೋಕ(18) ಎಂಬುವರು ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದರು. ನೆರೆಹೊರೆಯವರು ತಕ್ಷಣ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದಾಗ ಅಶೋಕ ಚೇತರಿಸಿಕೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲಾ ನಾಲ್ವರನ್ನೂ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಗೆ ಕಾರಣ ತಿಳಿಯಬೇಕಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.