ADVERTISEMENT

ಹಣ ಜಪ್ತಿ ಮುಚ್ಚಿಟ್ಟಿದ್ದ ಪ್ರಕರಣ ನಾಲ್ವರು ಪೊಲೀಸರ ಬಂಧನ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2022, 21:15 IST
Last Updated 27 ಅಕ್ಟೋಬರ್ 2022, 21:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೊಸಪೇಟೆ (ವಿಜಯನಗರ): ಜೂಜು ಅಡ್ಡೆ ಮೇಲೆ ದಾಳಿ ನಡೆಸಿ ಹಣ ವಶಪಡಿಸಿಕೊಂಡಿದ್ದ ಮಾಹಿತಿ ಮುಚ್ಚಿಟ್ಟಿದ್ದ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ.

ಪಟ್ಟಣ ಪೊಲೀಸ್‌ ಠಾಣೆಯಕಾನ್‌ಸ್ಟೆಬಲ್‌ಗಳಾದ ಮಹೇಶ್‌, ಅಭಿಷೇಕ್‌, ಮಂಜುನಾಥ ಹಾಗೂ ಶ್ರೀಕಾಂತ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಅವರೀಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ ತಿಳಿಸಿದ್ದಾರೆ.

ಆಗಿದ್ದೇನು?: ‘ದೀಪಾವಳಿ ಹಬ್ಬದ ಅಂಗವಾಗಿ ಅ. 23ರಂದು ತಡರಾತ್ರಿ ನಗರದ ಚಲುವಾದಿ ಕೇರಿಯಲ್ಲಿ ಕೆಲವರು ಜೂಜು ಆಡುತ್ತಿದ್ದರು.

ADVERTISEMENT

ಆಗ ದಾಳಿ ನಡೆಸಿದ್ದ ಕಾನ್‌ಸ್ಟೆಬಲ್‌ಗಳು ಅವರಿಂದ ₹20 ಸಾವಿರ ನಗದು, ₹3 ಸಾವಿರ ಮೌಲ್ಯದ ಮೊಬೈಲ್‌ ಫೋನ್‌ ವಶಪಡಿಸಿ
ಕೊಂಡಿದ್ದರು. ಆದರೆ, ಈ ಕುರಿತು ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ. ಪ್ರಕರಣವನ್ನು ದಾಖಲಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.