ADVERTISEMENT

ವಿಜಯನಗರಕ್ಕೆ ಆನಂದ್ ಸಿಂಗ್ ಜಿಲ್ಲಾ ಉಸ್ತುವಾರಿ ಸಚಿವ: ಸರ್ಕಾರದ ಆದೇಶ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 6:44 IST
Last Updated 30 ಜುಲೈ 2022, 6:44 IST
   

ಹೊಸಪೇಟೆ (ವಿಜಯನಗರ): ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ಅವರಿಗೆ
ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮುಜರಾಯಿ ಖಾತೆ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ.

ಜನವರಿ 24ರಂದು ಸರ್ಕಾರ ಆದೇಶ ಹೊರಡಿಸಿ ಆನಂದ್ ಸಿಂಗ್ ಹಾಗೂ ಶಶಿಕಲಾ ಅವರಿಗೆ ಕ್ರಮವಾಗಿ ಕೊಪ್ಪಳ, ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ನೇಮಿಸಿತ್ತು.

ADVERTISEMENT

ನೂತನ ಜಿಲ್ಲೆ ವೇಗವಾಗಿ ಕಟ್ಟಬೇಕಿದ್ದು, ತನಗೆ ಉಸ್ತುವಾರಿ ವಹಿಸಬೇಕೆಂದು ಆನಂದ್ ಸಿಂಗ್ ಸತತವಾಗಿ ಸಿ.ಎಂ.ಗೆ ಒತ್ತಾಯಿಸುತ್ತ ಬಂದಿದ್ದರು. ಕೊನೆಗೂ ಅವರ ಮಾತಿಗೆ ಈಗ ಮನ್ನಣೆ ಸಿಕ್ಕಿದೆ.

ಶಶಿಕಲಾ ಅವರು ವಿಜಯನಗರದತ್ತ ಸುಳಿಯದ ಕಾರಣ ತೀವ್ರ ಟೀಕೆಗೆ ಗುರಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.