ADVERTISEMENT

‘ಪ್ರಜಾವಾಣಿ’ ವರದಿ ಫಲಶ್ರುತಿ: ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 9:37 IST
Last Updated 4 ಸೆಪ್ಟೆಂಬರ್ 2022, 9:37 IST
   

ಹೊಸಪೇಟೆ (ವಿಜಯನಗರ): ನಗರದ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆರು ಜನ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಮಾಡಲಾಗಿದೆ.

‘ನಾವು ಆರು ಜನ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ಗೌರವ ಧನದ ಪೈಕಿ ಎರಡು ತಿಂಗಳದ್ದು ಬಿಡುಗಡೆಗೊಳಿಸಿದ್ದಾರೆ. ನಮ್ಮ ಸಮಸ್ಯೆ ಸರ್ಕಾರದ ಗಮನಕ್ಕೆ ತಂದು, ಪರಿಹಾರ ಕೊಟ್ಟಿದ್ದಕ್ಕೆ ‘ಪ್ರಜಾವಾಣಿ’ಗೆ ಕೃತಜ್ಞತೆ ತಿಳಿಸುತ್ತೇನೆ’ ಎಂದು ಅತಿಥಿ ಉಪನ್ಯಾಸಕರಾದ ಅನುಷಾ ಹಿರೇಮಠ, ಗಿರೀಶಗೌಡ, ಮಂಜುನಾಥ ತಿಳಿಸಿದರು.

‘ಮೂರು ತಿಂಗಳಿಂದ ಸಿಗದ ಗೌರವ ಧನ’ ಶೀರ್ಷಿಕೆ ಅಡಿ ಆ. 26ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.