ADVERTISEMENT

ಬಳ್ಳಾರಿ | ಆಜಾನ್‌ಗೆ ಪ್ರತಿಯಾಗಿ ಹನುಮಾನ ಚಾಲೀಸಾ ಪಠಣ

​ಪ್ರಜಾವಾಣಿ ವಾರ್ತೆ
Published 10 ಮೇ 2022, 8:48 IST
Last Updated 10 ಮೇ 2022, 8:48 IST
ಶ್ರೀರಾಮ ಸೇನೆಯ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ಹೊಸಪೇಟೆಯ ಅಭಯ ಆಂಜನೇಯ ದೇವಸ್ಥಾನದಲ್ಲಿ ಹನುಮಾನ ಚಾಳೀಸಾ ಪಠಿಸಿದರು
ಶ್ರೀರಾಮ ಸೇನೆಯ ಕಾರ್ಯಕರ್ತರು ಸೋಮವಾರ ಬೆಳಿಗ್ಗೆ ಹೊಸಪೇಟೆಯ ಅಭಯ ಆಂಜನೇಯ ದೇವಸ್ಥಾನದಲ್ಲಿ ಹನುಮಾನ ಚಾಳೀಸಾ ಪಠಿಸಿದರು   

ಹೊಸಪೇಟೆ (ವಿಜಯನಗರ): ಆಜಾನ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆ ಕಾರ್ಯಕರ್ತರು ಸೋಮವಾರ ನಗರದ ವಿವಿಧೆಡೆ ಹನುಮಾನ ಚಾಲೀಸಾ ಪಠಣ ಮಾಡಿದರು.

ಸುಪ್ರಭಾತದ ಸಮಯದಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ನಗರದ ಪಾದಗಟ್ಟೆ ಆಂಜನೇಯ ದೇವಸ್ಥಾನ, ಅಶ್ವತ್ಥನಾರಾಯಣ ಕಟ್ಟೆಯ ಅಭಯ ಆಂಜನೇಯ ದೇವಸ್ಥಾನ ಹಾಗೂ ಚಿತ್ತವಾಡ್ಗಿ ಕಲ್ಮಠದಲ್ಲಿ ಹನುಮಾನ್‌ ಚಾಲೀಸಾ ಪಠಿಸಿದರು.

ಶ್ರೀರಾಮ ಸೇನೆಯ ವಿಭಾಗೀಯ ಅಧ್ಯಕ್ಷ ಸಂಜೀವ್ ಮರಡಿ, ತಾಲ್ಲೂಕು ಅಧ್ಯಕ್ಷ ಜಗದೀಶ್ ಕಾಮಟಗಿ, ಉಪಾಧ್ಯಕ್ಷ ಸೂರಿ ಬಂಗಾರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ಪಿಐಗಳಾದ ಶ್ರೀನಿವಾಸ್, ಜಯಪ್ರಕಾಶ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.