ADVERTISEMENT

ವಿಜಯನಗರ ಜಿಲ್ಲೆಯಾದ್ಯಂತ ಭಾರಿ ಮಳೆ; ಶಾಲೆಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 4:03 IST
Last Updated 30 ಆಗಸ್ಟ್ 2022, 4:03 IST
ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ.
ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ.   

ಹೊಸಪೇಟೆ (ವಿಜಯನಗರ): ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಎಲ್ಲ ಶಾಲೆಗಳಿಗೆ ಮಂಗಳವಾರ (ಆ. 30) ರಜೆ ಘೋಷಿಸಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಆದೇಶ ಹೊರಡಿಸಿದ್ದಾರೆ.

ಮಂಗಳವಾರದ ರಜಾ ದಿನವನ್ನು ಬರುವ ಭಾನುವಾರ ತರಗತಿಗಳನ್ನು‌ ನಡೆಸಿ ಸರಿದೂಗಿಸಲಾಗುವುದು ಎಂದು ತಿಳಿಸಿದ್ದಾರೆ.

ಸತತ ನಾಲ್ಕನೇ ದಿನವೂ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮಂಗಳವಾರ ನಸುಕಿನ ಜಾವದಿಂದಲೇ ಮಳೆ ಸುರಿಯುತ್ತಿದೆ. ಇದು ಗೌರಿ ಗಣೇಶ ಹಬ್ಬದ ಖರೀದಿಗೆ‌ ಸಮಸ್ಯೆಯಾಗಿದೆ. ಜಿಲ್ಲೆಯ ಬಹುತೇಕ ಕೆರೆ ಕಟ್ಟೆ, ಹಳ್ಳಗಳು ತುಂಬಿ ಹರಿಯುತ್ತಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.