ADVERTISEMENT

ವಿಜಯನಗರ ​​​​​​​| ಮಳೆಗೆ ಕುಸಿದ ಪುಷ್ಕರಣಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 6:28 IST
Last Updated 10 ಅಕ್ಟೋಬರ್ 2022, 6:28 IST
   

ಹರಪನಹಳ್ಳಿ (ವಿಜಯನಗರ ಜಿಲ್ಲೆ): ನಿರಂತರ ಸುರಿಯುತ್ತಿರುವ ಮಳೆಯಿಂದ ತಾಲ್ಲೂಕಿನ ದೇವರ ತಿಮ್ಲಾಪುರ ಗ್ರಾಮದ ಐತಿಹಾಸಿಕ ಪುಷ್ಕರಣಿ ಗೋಡೆ ಕುಸಿದಿದೆ.

ಅಡವಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರ ತಿಮ್ಲಾಪುರ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಮತ್ತು ಪುಷ್ಕರಣಿ ಇದೆ. 60 ಅಡಿ ಆಳವಿರುವ ಪುಷ್ಕರಣಿಗೆ 600 ವರ್ಷಗಳ ಇತಿಹಾಸವಿದೆ. ಸಂಪೂರ್ಣ ಭರ್ತಿಯಾಗಿರುವ ಪುಷ್ಕರಣಿಯಲ್ಲಿ ಒಂದು ಭಾಗದ ಗೋಡೆ ಕುಸಿದಿದ್ದು, ಶೀಘ್ರವೇ ದುರಸ್ತಿ ಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT