ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಿದೆ.
ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಹರಪನಹಳ್ಳಿಯಲ್ಲೂ ಮಳೆಯಾಗಿರುವುದು ವರದಿಯಾಗಿದೆ.
ಭಾನುವಾರ ದಿನವಿಡೀ ಬಿಸಿಲು ಇತ್ತು. ಸಂಜೆ ದಟ್ಟ ಕಾರ್ಮೋಡ ಆವರಿಸಿಕೊಂಡಿತ್ತು. ನಂತರ ಗುಡುಗು, ಮಿಂಚಿನೊಂದಿಗೆ ಮಳೆ ಸುರಿಯಿತು. ತಂಗಾಳಿ ಬೀಸುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.