ADVERTISEMENT

ವಿಜಯನಗರಕ್ಕೆ ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ನೇಮಕ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 5:31 IST
Last Updated 19 ಅಕ್ಟೋಬರ್ 2021, 5:31 IST
   

ಹೊಸಪೇಟೆ (ವಿಜಯನಗರ): ಜಿಲ್ಲೆಯ ಹರಪನಹಳ್ಳಿ ಉಪವಿಭಾಗದ ಉಪವಿಭಾಗಾಧಿಕಾರಿ ಎಚ್.ಜಿ. ಚಂದ್ರಶೇಖರಯ್ಯ ಅವರನ್ನು ವಿಜಯನಗರ ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕೆಎಎಸ್ ಅಧಿಕಾರಿಯಾಗಿರುವ ಚಂದ್ರಶೇಖರಯ್ಯ ಇನ್ನು ಮುಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವರು.

ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಹುದ್ದೆ‌ ಸೃಜಿಸಲಾಗಿದೆ‌ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.