ಹೊಸಪೇಟೆ (ವಿಜಯನಗರ): ಹಂಪಿಯಲ್ಲಿ ಹೇರಿದ್ದ ನಿಷೇಧಾಜ್ಞೆ ಅವಧಿ ಮುಗಿಯುತ್ತಿದ್ದಂತೆ ಭಕ್ತರು ಸೋಮವಾರ ಹಂಪಿಗೆ ಬಂದು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿದರು.
ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ಚಳಿಯಲ್ಲೇ ನದಿಯಲ್ಲಿ ಮಿಂದೆದ್ದರು. ಬಳಿಕ ದೇವರ ದರ್ಶನ ಪಡೆದರು.
ಮಕರ ಸಂಕ್ರಮಣಕ್ಕೆ ಹೆಚ್ಚಿನ ಭಕ್ತರು ಬರುವ ನಿರೀಕ್ಷೆ ಇದ್ದದ್ದರಿಂದ ಜಿಲ್ಲಾಡಳಿತವು ನಿಷೇಧಾಜ್ಞೆ ಜಾರಿಗೊಳಿಸಿತ್ತು. ನಿಷೇಧಾಜ್ಞೆ ಸೋಮವಾರ ಬೆಳಿಗ್ಗೆ ಆರು ಗಂಟೆಯ ವರೆಗೆ ಜಾರಿಯಲ್ಲಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.