ADVERTISEMENT

ಹೊಸಪೇಟೆ: ಪ್ರವೀಣ್‌ ನೆಟ್ಟಾರುಗೆ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 8:21 IST
Last Updated 28 ಜುಲೈ 2022, 8:21 IST
   

ಹೊಸಪೇಟೆ (ವಿಜಯನಗರ): ಇತ್ತೀಚೆಗೆ ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ಅವರಿಗೆ ತಾಲ್ಲೂಕು ಆರ್ಯ ಈಡಿಗರ ಸೇವಾ ಟ್ರಸ್ಟ್‌ನಿಂದ ಗುರುವಾರ ನಗರದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ ಪ್ರವೀಣ್‌ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಟ್ರಸ್ಟ್‌ ಮುಖಂಡ ಈಡಿಗರ ಕುಮಾರಸ್ವಾಮಿ, ‘ಕರಾವಳಿ ಭಾಗದಲ್ಲಿ ಸತತವಾಗಿ ಈಡಿಗ ಸಮಾಜದ ಯುವಕರ ಹತ್ಯೆ ನಡೆಯುತ್ತಿರುವುದು ದುರದೃಷ್ಟಕರ. ಕೊಲೆಗೈದವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಪ್ರವೀಣ್‌ ಹತ್ಯೆ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು’ ಎಂದು ಆಗ್ರಹಿಸಿದರು.

ಮುಖಂಡರಾದ ರಮಣ, ನಾರಾಯಣಸ್ವಾಮಿ, ರಾಘವೇಂದ್ರ, ಈ. ಯರ್ರಿಸ್ವಾಮಿ, ಈ. ಪ್ರಸಾದ್‌, ರಂಗಣ್ಣ, ಶ್ರೀಕಾಂತ, ರಾಘವೇಂದ್ರ ಹಾನಗಲ್‌, ಗೋವಿಂದರಾಜ್‌, ಸತೀಶ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.