ಹೊಸಪೇಟೆ (ವಿಜಯನಗರ): ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಜಿಲ್ಲೆಯ ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕಿನಲ್ಲಿ ತಲಾ ಎರಡು ಮನೆಗಳಿಗೆ ಹಾನಿಯಾಗಿದೆ.
ಕೊಟ್ಟೂರು ತಾಲ್ಲೂಕಿನ ಚಿರಿಬಿಯಲ್ಲಿ 2, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕೆಚ್ಚಿನಬಂಡಿ ಗ್ರಾಮದಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ತಾಂಡದಲ್ಲಿ ಚೆಂಡು ಹೂ, ಡ್ರ್ಯಾಗನ್ ಫ್ರ್ಯೂಟ್, ಮೆಕ್ಕೆಜೋಳ ಜಲಾವೃತಗೊಂಡಿದೆ. ಹಳ್ಳ, ಕೊಳ್ಳಗಳು ತುಂಬಿ ಹರಿದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.