ADVERTISEMENT

ಹೊಸಪೇಟೆ: ಲೋಕಾಯುಕ್ತ ಪೊಲೀಸರಿಂದ ಚೆಕ್‌ಪೋಸ್ಟ್‌ ಮೇಲೆ ದಾಳಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 13:46 IST
Last Updated 30 ಸೆಪ್ಟೆಂಬರ್ 2022, 13:46 IST

ಹೊಸಪೇಟೆ (ವಿಜಯನಗರ): ಲೋಕಾಯುಕ್ತ ಪೊಲೀಸರು ನಗರ ಹೊರವಲಯದ ಶನೇಶ್ವರ ದೇವಾಲಯದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ಸಾರಿಗೆ ಇಲಾಖೆಯ ಮೊಬೈಲ್‌ ಚೆಕ್‌ಪೋಸ್ಟ್‌ ಮೇಲೆ ದಾಳಿ ನಡೆಸಿದರು.

ಲೋಕಾಯುಕ್ತ ಡಿವೈಎಸ್ಪಿ ಅಯ್ಯನಗೌಡ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ ವೇಳೆ ಚೆಕ್‌ಪೋಸ್ಟ್‌ನಲ್ಲಿ ಯಾರೊಬ್ಬರೂ ಇರಲಿಲ್ಲ ಎಂದು ಗೊತ್ತಾಗಿದೆ. ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನೆಪದಲ್ಲಿ ಚಾಲಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿರುವುದರಿಂದ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT