ಹೊಸಪೇಟೆ (ವಿಜಯನಗರ): ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆಟೊವನ್ನು ತಡೆದು ನಿಲ್ಲಿಸಿದ ಪೊಲೀಸರು, 13 ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿದ್ದ 590 ಕೆ.ಜಿ. ತೂಕದ ಅಕ್ಕಿಯನ್ನು ವಶಕ್ಕೆ ಪಡೆದಿರುವ ಘಟನೆ ನಗರದ ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಬಳಿ ಬುಧವಾರ ನಡೆದಿದೆ.
ಸಂಕ್ಲಾಪುರದಿಂದ ಬೈಪಾಸ್ ರಸ್ತೆಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಣೆ ಆಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಇದು ಬೆಳಕಿಗೆ ಬಂದಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಅವರ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.